ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.
Go to Home Page