ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.