ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.