ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.