ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.