ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.