ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿದನು. “ಇಗೋ, ಸರ್ವೇಶ್ವರ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ,” ಎಂದು ಹೇಳಿದನು.