ಆಗ ಆಮೋಚನ ಮಗ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ : “ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಈ ಮಾತುಗಳನ್ನು ಕೇಳು : ನೀನು ಅಸ್ಸೀರಿಯದ ಅರಸ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರ ಸ್ವಾಮಿಗೆ ಮುಟ್ಟಿವೆ. ಅವರು ಅವನಿಗೆ ವಿರುದ್ಧ ಹೀಗೆಂದಿದ್ದಾರೆ -