ಅವರೊಡನೆ ಮಾತಾಡುತ್ತಿರುವಾಗಲೇ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದನು. ಎಂದಿನಂತೆ ಯುದ್ಧ ಸವಾಲನ್ನು ಘೋಷಿಸಿದನು. ದಾವೀದನು ಅವನ ಮಾತುಗಳನ್ನು ಕೇಳಿದನು.