“ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.