ಅವರ ವಿಷಯವಾಗಿ ತಾನು ಕಂಡಿದ್ದ ಕನಸುಗಳನ್ನು ಜೋಸೆಫನು ನೆನಪಿಗೆ ತಂದುಕೊಂಡನು. ಅವರನ್ನು ನೋಡಿ, “ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಬಂದವರು,” ಎಂದನು.