ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.