ಮೋಶೆ ಮತ್ತು ಆರೋನರು ಸರ್ವೇಶ್ವರ ಸ್ವಾಮಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಫರೋಹನ ಹಾಗು ಅವನ ಪರಿವಾರದ ಮುಂದೆ ಆರೋನನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆದನು. ಅದೆಲ್ಲ ರಕ್ತಮಯ ಆಯಿತು.