ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.
Go to Home Page