ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.