ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.