ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರಿಗೂ ಇದೇ ಗತಿ ಆಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.