ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.