ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಜೋರ್ಡನ್ ನದಿಯಲ್ಲಿಳಿದು ಅರಸನ ಮನೆಯವರನ್ನು ದಾಟಿಸುವುದಕ್ಕೂ ಅವರಿಗೆ ಬೇಕಾದ ಸಹಾಯಮಾಡುವುದಕ್ಕೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಜೋರ್ಡನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿದನು.