ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.