ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.
Go to Home Page