ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.