ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”