ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.