“ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು.