ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.