“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.