ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.