ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.