ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.
Go to Home Page