ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.