ಅಹಾಬನು, “ಇದು ಯಾರ ಮುಖಾಂತರ ಆಗುವುದು?” ಎಂದು ಕೇಳಿದ್ದಕ್ಕೆ ಅವನು, “ಪ್ರದೇಶಾಧಿಪತಿಗಳ ಸೇವಕರ ಮುಖಾಂತರ ಆಗುವುದೆಂದು ಸರ್ವೇಶ್ವರ ತಿಳಿಸುತ್ತಾರೆ,” ಎಂದು ಉತ್ತರಕೊಟ್ಟನು. ಅಹಾಬನು ಮುಂದುವರಿದು, “ಯುದ್ಧ ಪ್ರಾರಂಭಮಾಡತಕ್ಕವರಾರು?” ಎಂದು ಕೇಳಲು ಅವನು, “ನೀನೇ” ಎಂದು ಉತ್ತರಿಸಿದನು.