ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”