ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.